ಬ್ರೇಕಿಂಗ್
ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ 60 ಸಾವಿರ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ಮೂಲಕ ಪರ್ಯಾಯ ವ್ಯವಸ್ಥೆ : ಮುಖ್ಯಮಂತ್ರಿ ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್ ಬೆಳಗಾವಿ ಅರಣ್ಯ ವಲಯದ 7 ಜಲಪಾತ ವೀಕ್ಷಣೆಗೆ  ಇನ್ನೊಂದು ತಿಂಗಳಲ್ಲಿ ಪರಿಸರ ಸ್ನೇಹಿ ಇಕೋ ಟೂರಿಸಂ ಅವಕಾಶ : ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌   ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ 60 ಸಾವಿರ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ಮೂಲಕ ಪರ್ಯಾಯ ವ್ಯವಸ್ಥೆ : ಮುಖ್ಯಮಂತ್ರಿ ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್ ಬೆಳಗಾವಿ ಅರಣ್ಯ ವಲಯದ 7 ಜಲಪಾತ ವೀಕ್ಷಣೆಗೆ  ಇನ್ನೊಂದು ತಿಂಗಳಲ್ಲಿ ಪರಿಸರ ಸ್ನೇಹಿ ಇಕೋ ಟೂರಿಸಂ ಅವಕಾಶ : ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌   ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ
11 ಜುಲೈ 2026
ಮಾದಕ ವ್ಯಸನ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ  : ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಕಾನೂನು ಅರಿವು ಅಗತ್ಯ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 44 ವೀಕ್ಷಣೆಗಳು

ಮಾದಕ ವ್ಯಸನ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ : ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಕಾನೂನು ಅರಿವು ಅಗತ್ಯ

ಮಾದಕ ವ್ಯಸನ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ

ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಕಾನೂನು ಅರಿವು ಅಗತ್ಯ : ಐಪಿಎಸ್ ಪರುಶುರಾಮ ಪೂಜಾರಿ

**

ಮಾದಕ ವ್ಯಸನ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಬೆಳಗಾವಿ ನಗರ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಾಯಿತು.

ಡ್ರಗ್ಸ್ ಮುಕ್ತ ಕರ್ನಾಟಕವನ್ನಾಗಿಸುವುದು ಎಲ್ಲರ‌ ಜವಾಬ್ದಾರಿಯಾಗಿದೆ. ಸುತ್ತಮುತ್ತ ಡ್ರಗ್ಸ್ ಚಟುವಟಿಕೆಗಳು ಕಂಡಾಗ KSP App ಮೂಲಕ ಸುಲಭವಾಗಿ ಮಾಹಿತಿ ಒದಗಿಸುವಂತೆ ಮತ್ತು ತುರ್ತು ಪರಿಸ್ಥಿತಿಗೆ 112 ಹಾಗೂ ಡ್ರಗ್ಸ್ ಬಗ್ಗೆ ಮಾಹಿತಿ ನೀಡಲು 1908 ನಂಬರಿಗೆ ಕರೆ ಮಾಡಿದರೆ ಪೊಲೀಸ್ ಇಲಾಖೆ ತಕ್ಷಣ ಕ್ರಮಕ್ಕೆ ಮುಂದಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಹೇಳುವ ಕಾರ್ಯಕ್ರಮಗಳು ನಡೆದವು.

ಈ ನಿಮಿತ್ತ ಬೆಂಗಳೂರಿನಲ್ಲಿ ‌ನಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮತ್ತು ಗೃಹ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಅವರು ಭಾಗವಹಿಸಿದ ಕಾರ್ಯಕ್ರಮದ ನೇರ ಪ್ರಸಾರವನ್ನು ಬೆಳಗಾವಿ ನಗರದ‌ ಜೆಜಿಐ ಸಂಸ್ಥೆಯ ‌ಜೈನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಸಿಪಿಐ ಪರುಶುರಾಮ ಪೂಜಾರಿ, ನೇತ್ರಾವತಿ ಪಾಟೀಲ ಅವರು ಉಪಸ್ಥಿತರಿದ್ದು ಅಪರಾಧಗಳ ರೀತಿ ಹಾಗೂ ಅವುಗಳನ್ನು ತಡೆಗಟ್ಟಲು ಜಾರಿಗೊಳಿಸಲಾದ ಕಾನೂನುಗಳ ಬಗ್ಗೆ ಅರಿವು ಮೂಡಿಸಿದರು.

ಡ್ರಗ್ಸ್ ಮುಕ್ತ ಸಮಾಜ ಸ್ವಾಸ್ಥ್ಯ ಸಮಾಜದ ಗುರುತು. ಯುವಕರು ಗೊತ್ತಿದ್ದು, ಗೊತ್ತಲ್ಲದೆ ಅಪರಾಧಿ ಪ್ರಕರಣಗಳ ಜಾಲದಲ್ಲಿ ಸಿಲುಕಿ ಜೀವನ ಹಾಳು ಮಾಡಿಕೊಳ್ಳುತ್ತಿದ್ದು, ಹಾಗಾಗದಂತೆ ಎಚ್ಚರ ವಹಿಸಿ ಜೀವನ ನಡೆಸಬೇಕು. ಅಪರಾಧಗಳು ಹೆಚ್ಚಾದಂತೆ ಕಾನೂನುಗಳು ಕಠಿಣ ರೀತಿಯಲ್ಲಿ ಮಾತನಾಡುತ್ತವೆ. ಯುವಕರು ಅಪರಾಧಿ ಸ್ಥಾನದಲ್ಲಿ ನಿಂತು ಕಾನೂನು ಎದುರಿಸಲು ಮುಂದಾದರೆ ಇಡೀ‌ ಜೀವನ ವ್ಯರ್ಥವಾಗುತ್ತದೆ. ಪೋಕ್ಸೊದಂತ ಕಾಯ್ದೆಗಳು ನಾನ್ ಬೆಲೆಬಲಾಗಿ ಕೆಲಸ ಮಾಡುತ್ತಿವೆ ಎಂದು ಸಿಪಿಐ ಪರಶುರಾಮ ಪೂಜಾರಿ ತಿಳಿ ಹೇಳಿದರು.

ಮನುಷ್ಯನಿಗೆ ಬದುಕು ಮುಖ್ಯ. ಅದು‌ ಹಾಳಾಗದಂತೆ ಎಚ್ಚರ ವಹಿಸಿ, ಸಾಧನೆ, ಗುರಿಯತ್ತ ಸಾಗುವ ಮಹದಾಶೆಯನ್ನು ವಿದ್ಯಾರ್ಥಿಗಳು ಹೊಂದಿರಬೇಕು. ಓದಿನತ್ತ ಲಕ್ಷವಿರಲಿ. ಕಾನೂನು ತಿಳುವಳಿಕೆ ಇರಲಿ ಎಂದು ಇನ್ನೋರ್ವ ಪೊಲೀಸ್ ಇನ್ಸ್ಪೆಕ್ಟರ್ ನೇತ್ರಾವತಿ ಪಾಟೀಲ ತಿಳಿಸಿದರು.

ಕಾಲೇಜಿನ ಪ್ರಾಚಾರ್ಯ ಪ್ರೊ. ವಿಶ್ವನಾಥ ಪಾಟೀಲ, ಪದವಿ ಕಾಲೇಜಿನ ಉಪ ಪ್ರಾಚಾರ್ಯ ಪ್ರೊ. ರಾಜೇಶ್ ಪ್ರಭು ಸೇರಿದಂತೆ ಸಿಬ್ಬಂದಿ ವರ್ಗ,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ಸುದ್ದಿ

ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ

ಅರ್ಹ ಮತದಾರರಿಗೆ ಅಗತ್ಯ ನೆರವು ನೀಡಿ, ಯಾವುದೇ ಅರ್ಹ ವ್ಯಕ್ತಿಯ ಹೆಸರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಜಾಗೃತಿ ಮೂಡಿಸೋಣ. ಪ್ರಜಾಪ್ರಭುತ್ವವನ್ನು ಬಲಪಡಿಸೋಣ... ಪ್ರತಿಯೊಬ್ಬ ಅರ್ಹ ಮತದಾರನ ಹಕ್ಕನ್ನು ಸಂರಕ್ಷಿಸೋಣ ಎಂದು ಸೂಚಿಸಿದ್ದಾರೆ

Admin
ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭  ಸೇತುವೆಗಳು ಜಲಾವೃತ್ತ ಬೆಳಗಾವಿ ಜಿಲ್ಲೆಯ ಸುದ್ದಿ

ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ

೧೬ ಮನೆಗಳಿಗೆ ಭಾಗಶಃ ಹಾನಿಯಾಗಿದ್ದು ಎರಡು ಮನೆಗಳಿಗೆ ಪೂರ್ಣ ಪ್ರಮಾಣದ ಹಾನಿಯಾಗಿದೆ

Admin