ಬೆಳಗಾವಿ ಅರಣ್ಯ ಪ್ರದೇಶ ಮತ್ತು ಜಲಪಾತಗಳಿಗೆ ಪ್ರವೇಶ ನಿಷೇಧ – ಅಕ್ರಮ ಪ್ರವೇಶಕ್ಕೆ ಕಾನೂನು ಕ್ರಮದ ಎಚ್ಚರಿಕೆ
ಅಸ್ಮಿತೆ ಸುದ್ದಿ : ಖಾನಾಪೂರ ತಾಲೂಕಿನ ಪಶ್ಚಿಮ ಘಟ್ಟದ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಸಾರ್ವಜನಿಕರ ಸುರಕ್ಷತೆಯ ಕಾರಣ ಬೆಳಗಾವಿ ಅರಣ್ಯ ವಲಯ ಹಾಗೂ ಜಲಪಾತ ಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ಕಣ್ಣು ತಪ್ಪಿಸಿ ಅನಧಿಕೃತವಾಗಿ ಪ್ರವೇಶಿಸಿದರೆ ಅರಣ್ಯ ಕಾಯ್ದೆಯಡಿ ಸೂಕ್ತ ಕಾನೂನುಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೆಳಗಾವಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.
ಮಳೆಯ ಕಾರಣ ಸಾರ್ವಜನಿಕರು ಜಲಪಾತಗಳಿಗೆ ತೆರಳುವುದು, ಅರಣ್ಯ ವೀಕ್ಷಣೆಗೆ ತೆರುತ್ತಿದ್ದು, ಮಳೆಯ ಪ್ರಮಾಣ ಹೆಚ್ಚಿರುವ ಪ್ರಸ್ತುತ ಸಂದರ್ಭದಲ್ಲಿ ಸುರಕ್ಷತೆಯ ದೃಷ್ಟಿಯಿಂದ ಅರಣ್ಯ ಪ್ರವೇಶಿಸುವುದು ಸೂಕ್ತವಲ್ಲ. ಸಾರ್ವಜನಿಕ ಪ್ರವೇಶ ನಿರ್ಭಂದನೆಗೆ ಹಾಗೂ ಸುರಕ್ಷತಾ ಕ್ರಮಕ್ಕಾಗಿ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಿಬ್ಬಂದಿಯ ಕಣ್ಣು ತಪ್ಪಿಸಿ ಅತಿಕ್ರಮಿಸಿ ಜಲಪಾತಗಳಿಗೆ ತೆರಳಿದರೆ ಮತ್ತು ಅರಣ್ಯ ಚಾರಣಕ್ಕೆ ತೆರಳಿದರೆ ಕರ್ನಾಟಕ ಅರಣ್ಯ ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಲಾಗುವುದ. ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ವಿನಂತಿಸಿಕೊಂಡಿದ್ದಾರೆ.
**
ಈ ಲೇಖನ ಹಂಚಿಕೊಳ್ಳಿ