ಯಳ್ಳೂರು ಕೇಬಲ್ ಕಾರ್ ಯೋಜನೆ ಅನುಮೋದನೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮನವಿ
ಅಸ್ಮಿತೆ ವರದಿ, ಅ.09: ಎಳ್ಳೂರು ಕೇಬಲ್ ಕಾರ್ ಯೋಜನೆಗೆ ಶೀಘ್ರ ಅನುಮೋದನೆ ನೀಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಮನವಿ ಮಾಡಿದ್ದಾರೆ.
ಶನಿವಾರ ನವದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ, ಈ ಯೋಜನೆಯ ಅನುಷ್ಠಾನದ ಬೇಡಿಕೆ ಬಹು ದಿನಗಳದಾಗಿದ್ದು, ಯೋಜನೆ ಕಾರ್ಯರೂಪಕ್ಕೆ ಬಂದರೆ ಈ ಭಾಗಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಲಿದ್ದಾರೆ. ಇದರಿಂದ ಸ್ಥಳೀಯರಿಗೆ ವ್ಯಾಪಾರ ಹಾಗೂ ಉದ್ಯೋಗದ ಹೊಸ ಅವಕಾಶಗಳು ಸೃಷ್ಟಿಯಾಗಲಿವೆ. ವಿಶೇಷವಾಗಿ ಇದು ಗಡಿ ಭಾಗವಾಗಿರುವುದರಿಂದ, ಪ್ರವಾಸೋದ್ಯಮದ ಅಭಿವೃದ್ಧಿಗೆ ಈ ಯೋಜನೆ ಮಹತ್ವದ ಕೊಡುಗೆ ನೀಡಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಿದರು.
ಯೋಜನೆಯ ಅನುಷ್ಠಾನಕ್ಕೆ ಈ ಹಿಂದೆ ಅನೇಕಬಾರಿ ಮನವಿ ಮಾಡಿಕೊಳ್ಳಲಾಗಿದೆ. ಅಂತಿಮ ಅನುಮೋದನೆ ದೊರೆತಿಲ್ಲ. ಶೀಘ್ರ ಅನುಮೋದಿಸುವಂತೆ ಶಾಸಕ ಅಭಯ ಪಾಟೀಲ ಒತ್ತಾಯಿಸಿದ್ದು, ಸಚಿವರು ಸಕಾರಾತ್ಮಕ ಭರವಸೆ ನೀಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ
**
ಈ ಲೇಖನ ಹಂಚಿಕೊಳ್ಳಿ