ಬ್ರೇಕಿಂಗ್
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ ಸಾಂಪ್ರದಾಯಿಕ ಆಯುಷ್ ಔಷಧಿ ಗುಣಮಟ್ಟದ ಸುಧಾರಣೆಗಾಗಿ ICMR ದಲ್ಲಿ ‌ತಜ್ಞರ ಕಾರ್ಯಾಗಾರ ಚಂಪಾ, ಕಣವಿ, ಚಿದಾನಂದಮೂರ್ತಿ ಸಮಗ್ರ ಸಾಹಿತ್ಯ ಸಂಪುಟ ಲಭ್ಯ ಬೆಳಗಾವಿ ವಾಣಿಜ್ಯೋದ್ಯಮ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ - ಸ್ವಪ್ನಿಲ್ ಶಾ ನೂತನ ಅಧ್ಯಕ್ಷ ಸಾಂಸ್ಕೃತಿಕ ಮೆರುಗು ತಂದ ಯುವ ಸೌರಭ ಗೊತ್ತುವಳಿ ಅಂಗೀಕರಿಸದಿದ್ದರೆ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಯೊಂದಿಗೆ ಚರ್ಚೆ - ಸಚಿವ ಯತೀಂದ್ರ ಸಿದ್ಧರಾಮಯ್ಯ ಎಚ್ಚರಿಕೆ ಸಕಾಲಕ್ಕೆ ಮಾಹಿತಿ‌ ಒದಗಿಸದ ತಹಶೀಲ್ದಾರ ಸೇರಿ ಮೂವರಿಗೆ ತಲಾ 10 ಸಾವಿರ ದಂಡ “ಪ್ರಾಚೀನ ಬೌದ್ಧ ತಾಣ ಸಾರನಾಥ” ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರ್ಪಡೆ ಕಾರ್ಗಿಲ್ ವಿಜಯೋತ್ಸವ : ಮರಾಠಾ ಲಘು ಪದಾತಿದಳದ ಸೈನಿಕರ ಸಾಹಸ ಸುವರ್ಣಾಕ್ಷರ ಕಾರ್ಗಿಲ್‌ ವಿಜಯೋತ್ಸವ ನಿಮಿತ್ತ ಬೈಕ್‌ ರ್ಯಾಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ ಸಾಂಪ್ರದಾಯಿಕ ಆಯುಷ್ ಔಷಧಿ ಗುಣಮಟ್ಟದ ಸುಧಾರಣೆಗಾಗಿ ICMR ದಲ್ಲಿ ‌ತಜ್ಞರ ಕಾರ್ಯಾಗಾರ ಚಂಪಾ, ಕಣವಿ, ಚಿದಾನಂದಮೂರ್ತಿ ಸಮಗ್ರ ಸಾಹಿತ್ಯ ಸಂಪುಟ ಲಭ್ಯ ಬೆಳಗಾವಿ ವಾಣಿಜ್ಯೋದ್ಯಮ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ - ಸ್ವಪ್ನಿಲ್ ಶಾ ನೂತನ ಅಧ್ಯಕ್ಷ ಸಾಂಸ್ಕೃತಿಕ ಮೆರುಗು ತಂದ ಯುವ ಸೌರಭ ಗೊತ್ತುವಳಿ ಅಂಗೀಕರಿಸದಿದ್ದರೆ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಯೊಂದಿಗೆ ಚರ್ಚೆ - ಸಚಿವ ಯತೀಂದ್ರ ಸಿದ್ಧರಾಮಯ್ಯ ಎಚ್ಚರಿಕೆ ಸಕಾಲಕ್ಕೆ ಮಾಹಿತಿ‌ ಒದಗಿಸದ ತಹಶೀಲ್ದಾರ ಸೇರಿ ಮೂವರಿಗೆ ತಲಾ 10 ಸಾವಿರ ದಂಡ “ಪ್ರಾಚೀನ ಬೌದ್ಧ ತಾಣ ಸಾರನಾಥ” ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರ್ಪಡೆ ಕಾರ್ಗಿಲ್ ವಿಜಯೋತ್ಸವ : ಮರಾಠಾ ಲಘು ಪದಾತಿದಳದ ಸೈನಿಕರ ಸಾಹಸ ಸುವರ್ಣಾಕ್ಷರ ಕಾರ್ಗಿಲ್‌ ವಿಜಯೋತ್ಸವ ನಿಮಿತ್ತ ಬೈಕ್‌ ರ್ಯಾಲಿ
31 ಜುಲೈ 2026
ಗೊತ್ತುವಳಿ ಅಂಗೀಕರಿಸದಿದ್ದರೆ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಯೊಂದಿಗೆ ಚರ್ಚೆ - ಸಚಿವ ಯತೀಂದ್ರ ಸಿದ್ಧರಾಮಯ್ಯ ಎಚ್ಚರಿಕೆ
📄 ಕರ್ನಾಟಕ ಸುದ್ದಿ
Dr. K N Doddmani · · 26 ವೀಕ್ಷಣೆಗಳು

ಗೊತ್ತುವಳಿ ಅಂಗೀಕರಿಸದಿದ್ದರೆ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಯೊಂದಿಗೆ ಚರ್ಚೆ - ಸಚಿವ ಯತೀಂದ್ರ ಸಿದ್ಧರಾಮಯ್ಯ ಎಚ್ಚರಿಕೆ

ಅಸ್ಮಿತೆ ವರದಿ, ಜು.28: "ಬೆಳಗಾವಿ ಮಹಾ ನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿಯನ್ನು ಅಂಗೀಕರಿಸಬೇಕು.ಇಲ್ಲದೇ ಹೋದರೆ ಸರ್ಕಾರ ಮುಂದಿನ ಕಠಿಣ ನಿರ್ಧಾರದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುತ್ತೇನೆ" ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ಧರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸಬೇಕೆಂದು ಆಗ್ರಹಿಸಿ ಕಳೆದ ಮಾರ್ಚ 26 ರಿಂದ ಹೋರಾಟ ನಡೆಸುತ್ತಿರುವ ಸಮಾನ ಮನಸ್ಕ 22 ಕನ್ನಡಪರ ಸಂಘಟನೆಗಳ ಅಧ್ಯಕ್ಷರುಗಳೊಂದಿಗೆ ಇಂದು ಬೆಳಗಾವಿ ಸರ್ಕಿಟ್ ಹೌಸ್ ನಲ್ಲಿ ಸುದೀರ್ಘವಾಗಿ ಚರ್ಚೆ ಸಚಿವರು ಕಠಿಣ ಕ್ರಮದ ಸೂಚನೆ ನೀಡಿದ್ದಾರೆ.

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ,ಗಡಿವಿವಾದಕ್ಕೆ ಮಹಾಜನ ಆಯೋಗದ ವರದಿಯೇ ಅಂತಿಮ ಎಂಬುದು ರಾಜ್ಯ ಸರಕಾರದ ನಿಲುವಾಗಿದೆ.ಬೆಳಗಾವಿ ಪಾಲಿಕೆಯಲ್ಲಿ ಇಂಥ ಗೊತ್ತುವಳಿ ಅಂಗೀಕರಿಸಲು ಯಾವದೇ ಕಾನೂನು ತೊಡಕಿಲ್ಲ ಎಂದು ಗಡಿ ಹಾಗೂ ನದಿಗಳ ಸಂರಕ್ಷಣಾ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ನಾಗಮೋಹನದಾಸ ಅವರು ಸ್ಪಷ್ಟ ಅಭಿಪ್ರಾಯ ತಿಳಿಸಿದ್ದಾರೆ.ಗೊತ್ತುವಳಿ ಪಾಸು ಮಾಡುವದು ಅನಿವಾರ್ಯ ಹಾಗೂ ಅವಶ್ಯ ಎಂದೂ ಸಹ ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಬೆಳಗಾವಿ ಪಾಲಿಕೆಯಲ್ಲಿ ಬಹುಮತ ಹೊಂದಿರುವವರು ತಾವಾಗಲೇ ಕರ್ನಾಟಕ ಪರವಾದ ಗೊತ್ತುವಳಿ ಪಾಸು ಮಾಡಬೇಕಿತ್ತು.ನಾಲ್ಕು ತಿಂಗಳ ಕಾಲ ಹೋರಾಟ ನಡೆಸಿರುವುದು ಮತ್ತು ಈ ಸಂಬಂಧ ನಡೆದಿರುವ ಬೆಳವಣಿಗೆಗಳು ಮೊನ್ನೆಯಷ್ಟೇ ತಮ್ಮ ಗಮನಕ್ಕೆ ಬಂದಿದೆ. ಮುಖ್ಯಮಂತ್ರಿಗಳ ಜೊತೆಗೆ ಈ ಸಂಬಂಧ ಶೀಘ್ರವೇ ಚರ್ಚೆ ನಡೆಸುತ್ತೇನೆ ಎಂದು ಸಚಿವರು ಹೋರಾಟಗಾರರಿಗೆ ಭರವಸೆ ನೀಡಿದ್ದಾರೆ.

ವಿಷಯ ಬೆಳವಣಿಗೆ ಬಗ್ಗೆ ಸಚಿವರ ಗಮನಕ್ಕೆ ತಂದ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ,"ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಗೊತ್ತುವಳಿ ಅಂಗೀಕರಿಸಲು ಹೋರಾಟ ನಡೆಸಬೇಕಾಗಿ ಬಂದಿರುವುದೇ ಒಂದು ದೊಡ್ಡ ದುರಂತ.2005 ರಲ್ಲಿ ಬೆಳಗಾವಿ ಪಾಲಿಕೆಯಲ್ಲಿ ಮಹಾರಾಷ್ಟ್ರ ಪರವಾದ ಗೊತ್ತುವಳಿ ಸ್ವೀಕರಿಸಿದ್ದನ್ನು ಮಹಾರಾಷ್ಟ್ರ ಸರಕಾರ ಸುಪ್ರೀಂ ಕೋರ್ಟಿನ ಮುಂದಿರುವ ಗಡಿವಿವಾದ ಪ್ರಕರಣದಲ್ಲಿ ಪೂರಕ ದಾಖಲೆಯನ್ನಾಗಿ ಬಳಸಿದೆ.ಅದಕ್ಕೆ ಎದಿರೇಟು ನೀಡಲು ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿಯನ್ನು ಅಂಗೀಕರಿಸಲು ಕನ್ನಡ ಸಂಘಟನೆಗಳು ಹೋರಾಟ ನಡೆಸಿವೆ ರಾಜ್ಯ ಸರಕಾರ ತಾನಾಗಿಯೇ ಮುಂದಾಗಿ ಮಾಡಬೇಕಾದ ಕೆಲಸವನ್ನು ಕನ್ನಡ ಸಂಘಟನೆಗಳು ಮಾಡಿವೆ.ಗೊತ್ತುವಳಿ ಪಾಸು ಮಾಡುವ ಬಗ್ಗೆ ಪಾಲಿಕೆಯ ಮೇಯರ್ ರಾಜ್ಯ ಸರಕಾರದ ಅಭಿಪ್ರಾಯ ಕೇಳಿದರು.ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳು ತಮ್ಮ ಮೇಲಿನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮಾಡಿದ ಕುತಂತ್ರಗಳಿಂದ ಕನ್ನಡ ಸಂಘಟನೆಗಳು ರೋಸಿ ಹೋಗಿವೆ.ಹಿರಿಯ ಅಧಿಕಾರಿಗಳು ಕರ್ನಾಟಕದಲ್ಲಿ ಕೆಲಸ ಮಾಡುತ್ತಿದ್ದಾರೆಯೇ" ಎಂದು ಸಂಶಯ ಬರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಿತ್ತೂರು ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷ ಮಹಾದೇವ ತಳವಾರ,ಗಡಿನಾಡು ಕನ್ನಡಿಗರ ಸೇನೆಯ ರಾಜ್ಯಾಧ್ಯಕ್ಷ ಬಲರಾಮ ಮಾಸೇನಟ್ಟಿ,ಸರ್ವೋದಯ ಸಂಘದ ಅಧ್ಯಕ್ಷ ಶ್ರೀನಿವಾಸ ತಾಳು ಕರ,ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷ ವಾಜಿದ್ ಹಿರೆಕೋಡಿ,ಜಯಕರ್ನಾಟಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷ ಶಿವಾರೆಡ್ಡಿ ಹುಚ್ಚರೆಡ್ಡಿ ಮುಂತಾದವರು ಮಾತನಾಡಿ,ಬೆಳಗಾವಿಯ ನಾಮಫಲಕಗಳಲ್ಲಿ ಕನ್ನಡವನ್ನು ಪ್ರಧಾನವಾಗಿ ಬಳಸುವ ಕುರಿತು ಪಾಲಿಕೆಯ ಅಧಿಕಾರಿಗಳು ರಾಜ್ಯ ಸರಕಾರದ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ತಿಳಿಸಿದರು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ ಕರ್ನಾಟಕ ಸುದ್ದಿ

ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ

"ಕೆಲವರು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಆದರೆ 50% ಉದ್ಯಮಿಗಳು ಈ ಸಿಎಸ್ಆರ್ ನಿಧಿ ದುರುಪಯೋಗ ಮಾಡುತ್ತಿದ್ದಾರೆ. ಹೀಗಾಗಿ ಪ್ರತ್ಯೇಕ ಅಧಿಕಾರಿಗಳ ತಂಡ ನೇಮಿಸಿ ನಿಧಿಯನ್ನು ಎಲ್ಲೆಲ್ಲಿ ಬಳಸಲಾಗುತ್ತಿದೆ ಎಂದು ಪರಿಶೀಲನೆ ಮಾಡಲಾಗುವುದು”

Admin
ಗೊತ್ತುವಳಿ ಅಂಗೀಕಾರಕ್ಕೆ ಕಾನೂನು ತೊಡಕಿಲ್ಲ, ಸ್ವೀಕಾರ ಅವಶ್ಯಕ : ನ್ಯಾಯಮೂರ್ತಿ ನಾಗಮೋಹನದಾಸ್ ಸರ್ಕಾರಕ್ಕೆ ಪತ್ರ ಕರ್ನಾಟಕ ಸುದ್ದಿ

ಗೊತ್ತುವಳಿ ಅಂಗೀಕಾರಕ್ಕೆ ಕಾನೂನು ತೊಡಕಿಲ್ಲ, ಸ್ವೀಕಾರ ಅವಶ್ಯಕ : ನ್ಯಾಯಮೂರ್ತಿ ನಾಗಮೋಹನದಾಸ್ ಸರ್ಕಾರಕ್ಕೆ ಪತ್ರ

ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ ಅವರಿಗೆ ನಿನ್ನೆ ದಿ.17 ರಂದು ಪತ್ರ ಬರೆದಿರುವ ಅವರು, ಗೊತ್ತುವಳಿ ಅಂಗೀಕಾರಕ್ಕೆ ಯಾವುದೇ ರೀತಿಯ ಕಾನೂನು ತೊಡಕಿಲ್ಲದಾಗಿದ್ದು, ಈ ಸಂಬಂಧ ಸೂಕ್ತ  ಕ್ರಮ ಕೈಗೊಳ್ಳಬೇಕೆಂದ ಸಲಹೆ ನೀಡಿದ್ದಾರೆ. 

Admin