ಹಿರಿಯ ಪತ್ರಕರ್ತ ಉದಯಕುಮಾರ್ ಅವರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ
ಅಸ್ಮಿತೆ ವರದಿ, ಅ.8: ಪತ್ರಿಕಾ ರಂಗದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತ, ಪ್ರಜಾವಾಣಿಯ ನಿವೃತ್ತ ಸಹಾಯಕ ಸಂಪಾದಕ ಉದಯಕುಮಾರ್ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಿದರು.
ಖಾದ್ರಿ ಶಾಮಣ್ಣ ಟ್ರಸ್ಟ್ ಇಂದು ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು.

ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ, ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ವೂಡೇ ಪಿ.ಕೃಷ್ಣ, ಹಿರಿಯ ಪತ್ರಕರ್ತ ಕೆ.ವಿ.ನಾಗರಾಜು, ಟ್ರಸ್ಟ್ ಅಧ್ಯಕ್ಷ ಶ್ರೀಶ, ಶ್ರೀಮತಿ ಸುನಿತಾ ಉದಯಕುಮಾರ್ ಉಪಸ್ಥಿತರಿದ್ದರು.
ಉದಯಕುಮಾರ ಅವರು ಈ ಹಿಂದೆ ಬೆಳಗಾವಿಯಲ್ಲಿಯೂ ಪ್ರಜಾವಾಣಿಯ ಹಿರಿಯ ವರದಿಗಾರರಾಗಿ ಜನಪರ ಸೇವೆ ಸಲ್ಲಿಸುವುದರ ಜೊತೆಗೆ ಹೊಸ ತಲೆಮಾರಿಗೆ ಮಾರ್ಗದರ್ಶನ ನೀಡಿರುವುದನ್ನು ಸ್ಮರಿಸಿಕೊಳ್ಳಬಹುದಾಗಿದೆ.
ಈ ಲೇಖನ ಹಂಚಿಕೊಳ್ಳಿ