ಬ್ರೇಕಿಂಗ್
ಸಾಮರಸ್ಯ ಕೆಡಿಸುವ ಎಂಇಎಸ್‌, ಶಿವಸೇನೆ ನಿಷೇಧಕ್ಕೆ ಕರವೇ ಆಗ್ರಹ ಸುವರ್ಣ ಸೌಧದ ಎದುರು ಅಂತರಾಷ್ಟ್ರೀಯ ಯೋಗ‌ ದಿನಾಚರಣೆ ಸೈಬರ್ ವಂಚನೆಯಿಂದ ಹಣ ಕಳೆದುಹೋಗದಂತೆ ಪೊಲೀಸ್ ಇಲಾಖೆ ಆಧುನಿಕ ತಂತ್ರಜ್ಞಾನದ ಬಿಗಿಕ್ರಮ - ಪ್ರಿಯಾಂಕ ಖರ್ಗೆ ಕನ್ನಡಕ್ಕೆ ಮೊದಲ ಆದ್ಯತೆ ನೀಡಲು ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಬಿಳಿಮಲೆ ಆಗ್ರಹ ರಕ್ಷಣಾ ಭದ್ರತಾ ದಳಕ್ಕೆ (ಡಿಎಸ್‌ಸಿ) ಮಾಜಿ ಸೈನಿಕರ ನೇಮಕಾತಿ ಮಂಗಾವತಿ :   ಸೇವಾ ನಿವೃತ್ತ ಹಾಗೂ ಪ್ರತಿಭಾ ಸಾಧಕರಿಗೆ ಗೌರವ ಸನ್ಮಾನ 232 ಗ್ರೇಡ್-2 ತಹಶೀಲ್ದಾರ್‌ಗಳಿಗೆ ಗ್ರೇಡ್-1 ತಹಶೀಲ್ದಾರ್ ಹುದ್ದೆಗೆ ಬಡ್ತಿ ಮಹಾದಾಯಿ, ಕೃಷ್ಣೆ, ಕಾವೇರಿ ಜಲ ವಿವಾದ ನಿವಾರಣೆಗೆ ರಾಜ್ಯ ಸರ್ಕಾರದ ಹೆಚ್ಚಿನ ಮುತವರ್ಜಿ ಅಗತ್ಯ : ನ್ಯಾಯವಾದಿ ಮೋಹನ ಕಾತರಕಿ ಸಂವಿಧಾನ ಹಾಗೂ ಬಾಬಾಸಾಹೇಬರ ಸಿದ್ಧಂತಕ್ಕೆ ಅನುಸಾರ ರಾಜಕೀಯ ಮಾಡುತ್ತ ಬಂದಿದ್ದೇನೆ - ಮಾಜಿ ಸಚಿವ ಎಚ್.ಸಿ. ಮಹಾದೇವಪ್ಪ ಸ್ಪಷ್ಟನೆ ಅಭಿವೃದ್ಧಿಯ ಸ್ಪಷ್ಟವಾದ ಗುರಿಯೊಂದಿಗೆ ನರೇಂದ್ರ ಮೋದಿ ಸರ್ಕಾರ ಸಾಧನೆ : ಕೇಂದ್ರ ಸಚಿವ ಭೂಪತಿರಾಜ್ ಶ್ರೀನಿವಾಸ ವರ್ಮಾ ಸಾಮರಸ್ಯ ಕೆಡಿಸುವ ಎಂಇಎಸ್‌, ಶಿವಸೇನೆ ನಿಷೇಧಕ್ಕೆ ಕರವೇ ಆಗ್ರಹ ಸುವರ್ಣ ಸೌಧದ ಎದುರು ಅಂತರಾಷ್ಟ್ರೀಯ ಯೋಗ‌ ದಿನಾಚರಣೆ ಸೈಬರ್ ವಂಚನೆಯಿಂದ ಹಣ ಕಳೆದುಹೋಗದಂತೆ ಪೊಲೀಸ್ ಇಲಾಖೆ ಆಧುನಿಕ ತಂತ್ರಜ್ಞಾನದ ಬಿಗಿಕ್ರಮ - ಪ್ರಿಯಾಂಕ ಖರ್ಗೆ ಕನ್ನಡಕ್ಕೆ ಮೊದಲ ಆದ್ಯತೆ ನೀಡಲು ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಬಿಳಿಮಲೆ ಆಗ್ರಹ ರಕ್ಷಣಾ ಭದ್ರತಾ ದಳಕ್ಕೆ (ಡಿಎಸ್‌ಸಿ) ಮಾಜಿ ಸೈನಿಕರ ನೇಮಕಾತಿ ಮಂಗಾವತಿ :   ಸೇವಾ ನಿವೃತ್ತ ಹಾಗೂ ಪ್ರತಿಭಾ ಸಾಧಕರಿಗೆ ಗೌರವ ಸನ್ಮಾನ 232 ಗ್ರೇಡ್-2 ತಹಶೀಲ್ದಾರ್‌ಗಳಿಗೆ ಗ್ರೇಡ್-1 ತಹಶೀಲ್ದಾರ್ ಹುದ್ದೆಗೆ ಬಡ್ತಿ ಮಹಾದಾಯಿ, ಕೃಷ್ಣೆ, ಕಾವೇರಿ ಜಲ ವಿವಾದ ನಿವಾರಣೆಗೆ ರಾಜ್ಯ ಸರ್ಕಾರದ ಹೆಚ್ಚಿನ ಮುತವರ್ಜಿ ಅಗತ್ಯ : ನ್ಯಾಯವಾದಿ ಮೋಹನ ಕಾತರಕಿ ಸಂವಿಧಾನ ಹಾಗೂ ಬಾಬಾಸಾಹೇಬರ ಸಿದ್ಧಂತಕ್ಕೆ ಅನುಸಾರ ರಾಜಕೀಯ ಮಾಡುತ್ತ ಬಂದಿದ್ದೇನೆ - ಮಾಜಿ ಸಚಿವ ಎಚ್.ಸಿ. ಮಹಾದೇವಪ್ಪ ಸ್ಪಷ್ಟನೆ ಅಭಿವೃದ್ಧಿಯ ಸ್ಪಷ್ಟವಾದ ಗುರಿಯೊಂದಿಗೆ ನರೇಂದ್ರ ಮೋದಿ ಸರ್ಕಾರ ಸಾಧನೆ : ಕೇಂದ್ರ ಸಚಿವ ಭೂಪತಿರಾಜ್ ಶ್ರೀನಿವಾಸ ವರ್ಮಾ
21 ಜೂನ್ 2026
6 ರಂದು ಸಾಂಬ್ರಾದಲ್ಲಿ ಸಾರಂಗ ಹೆಲಿಕಾಪ್ಟರ್ ತಂಡದಿಂದ ಆಕಾಶದಲ್ಲಿ ಆಕರ್ಷಕ ಚಿತ್ತಾರ
📄 ರಾಷ್ಟ್ರೀಯ ಸುದ್ದಿ
Dr. K N Doddmani · · 133 ವೀಕ್ಷಣೆಗಳು

6 ರಂದು ಸಾಂಬ್ರಾದಲ್ಲಿ ಸಾರಂಗ ಹೆಲಿಕಾಪ್ಟರ್ ತಂಡದಿಂದ ಆಕಾಶದಲ್ಲಿ ಆಕರ್ಷಕ ಚಿತ್ತಾರ

ವಾಯುಪಡೆಯ ಶಾಲೆಯಲ್ಲಿ ತರಬೇತಿ ಪಡೆದ 7ನೇ ತಂಡದ 1 ಸಾವಿರದ 250 ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚನ ನಿಮಿತ್ತ ಸಾರಂಗ ತಂಡದಿಂದ ಅತ್ಯಾಕರ್ಷಕ ಹೆಲಿಕಾಪ್ಟರ್ ಪ್ರದರ್ಶನ ಜರುಗಲಿದೆ

6 ರಂದು ವಾಯಪಡೆ ಅಗ್ನಿವೀರರ ನಿರ್ಗಮನ ಪಥ ಸಂಚಲ, ರೋಮಾಂಚಕಾರಿ ಸಾರಂಗ್ ಹೆಲಿಕಾಪ್ಟರ್ ಪ್ರದರ್ಶನ

ಬೆಳಗಾವಿ ಸಾಂಬ್ರಾದಲ್ಲಿನ ಭಾರತೀಯ ವಾಯುಪಡೆಯ ತರಬೇತಿ ಶಾಲೆಯಲ್ಲಿ ಸತತ 22 ವಾರಗಳ ವರೆಗೆ ಅತ್ಯಂತ ಕಠಿಣ ಹಾಗೂ ಪರಿಣಾಮಾತ್ಮ ತರಬೇತಿ ಪಡೆದ 7ನೇ ತಂಡದ 1 ಸಾವಿರದ 250 ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚನ ಇದೆ‌ ಜೂನ್ 6 ರಂದು ಸಾಂಬ್ರಾದಲ್ಲಿ ಜರುಗಲಿದೆ.

ಅಂದಿನ ವಾಯುಪಡೆ ಅಗ್ನಿವೀರರ ನಿರ್ಗಮನ ಪಥ ಸಂಚಲನ ನಿಮಿತ್ತ ಈ ಸಲ ಕುಶಾಲಾಗ್ರ ಸಾರಂಗ ಪೈಲಟ್ ತಂಡದಿಂದ ರೋಮಾಂಚಕಾರಿ ಹೆಲಿಕಾಪ್ಟರ್ ಪ್ರದರ್ಶನ ನಡೆಯಲಿದ್ದು ಆಕಾಶದಲ್ಲಿ ಅತ್ಯಾಕರ್ಷಕ ಚಿತ್ತಾರ ಮೂಡಿಸಲಿವೆ ಎಂದು ಕಮಾಂಡಿಂಗ್ ಅಧಿಕಾರಿ ಜಿಪಿ‌ ಕ್ಯಾಪ್ಟನ್ ಅಭಿಜೀತ್ ಕುಮಾರ ತಿಳಿಸಿದ್ದಾರೆ.

ಸಾಂಬ್ರಾ ವಾಯುಪಡೆ ತರಬೇತಿ ಶಾಲೆಯಲ್ಲಿ ಇಂದು ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಸಾರಂಗ ತಂಡದ 10 ಜನ ಅನುಭವಿ ಪೈಲಟ್ ಗಳಿಂದ ಸುಸಜ್ಜಿತ 5 ಹೆಲಿಕಾಪ್ಟರ್ ಗಳ ಮೂಲಕ ವಿಭಿನ್ನ ರೀತಿಯ‌ ಪ್ರದರ್ಶನ ನಡಿಸಿ ಕೌಶಲ್ಯತೆ ಮೆರೆಯಲಿದ್ದಾರೆ. ಆಕಾಶದಲ್ಲಿನ ಹೆಲಿಕಾಪ್ಟರ್ ಗಳ ಭವ್ಯ ಪ್ರದರ್ಶನ ಸಾರಂಗ ತಂಡದ ಸೈನಿಕ ಶಿಸ್ತು, ವೃತ್ತಿಪರತೆ ಮತ್ತು ವಾಯುಪಡೆಯ ಶ್ರೇಷ್ಠತೆಯ ದ್ಯೋತಕವಾಗಲಿದೆ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನಿ ಏರೋನಾಟಿಕ್ಸ್ ಲಿಮಿಟೆಡ್ (HAL) ಸಂಸ್ಥೆ ಸ್ಥಳೀಯವಾಗಿ ವಿನ್ಯಾಸಗೊಳಿಸಿ ಆಧುನಿಕ ತಂತ್ರಜ್ಞಾನದ ಮೂಲಕ ಅಭಿವೃದ್ಧಿಪಡಿಸಿ ತಯಾರಿಸಿದ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ (ALH) ದೃವ ನಿರ್ವಹಿಸಲಿದೆ. ಇದು ಭಾರತದ ಬೆಳೆಯುತ್ತಿರುವ ಏರೋಸ್ಪೇಸ್ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತದೆ. ಎಲ್ಲ ಬಗೆಯ ವಾಯುಗುಣದಲ್ಲಿ ವಿಭಿನ್ನ ಕೌಶಲ್ಯ ಸಾಮರ್ಥ್ಯ ಹೊಂದಿದೆ ಎಂದು ಕ್ಯಾಪ್ಟನ್ ಅಭಿಜೀತ್ ಕುಮಾರ ತಿಳಿಸಿದ್ದಾರೆ.

ಭಾರತ ಹಾಗೂ ವಿದೇಶಗಳಲ್ಲಿ ತನ್ನ ಅತ್ಯಾಕರ್ಷಕ ಪ್ರದರ್ಶನದ ಮೂಲಕ ಅಪಾರ ಮೆಚ್ಚುಗೆಗೆ ಪಾತ್ರವಾಗಿರುವ ಸಾರಂಗ ತಂಡ 2004 ರಲ್ಲಿ ಸಿಂಗಾಪುರ್ ನಲ್ಲಿ ನಡೆದ ಏಷ್ಯನ್ ಏರೋಸ್ಪೇಸ್ ಅಂತರಾಷ್ಟ್ರೀಯ ಪ್ರದರ್ಶನದಲ್ಲಿ ಮೊದಲು ಪಾದಾರ್ಪಣೆ ಮಾಡಿ ಪ್ರದರ್ಶನ ನೀಡಿದೆ. ಅಂದಿನಿಂದ ಇಲ್ಲಿಯವರೆಗೆ ಪ್ರಪಂಚದಾದ್ಯಂತ 390 ಹೆಚ್ಚಿನ ಸ್ಥಳಗಳಲ್ಲಿ 1 ಸಾವಿರದ 200 ಕ್ಕೂ ಹೆಚ್ಚು ಪ್ರದರ್ಶನ ನೀಡಿ ಗಮನ ಸೆಳೆದಿದೆ ಎಂದು ಕ್ಯಾಪ್ಟನ್ ಅಭಿಜೀತ್ ಕುಮಾರ ಮಾಹಿತಿ ನೀಡಿದ್ದಾರೆ.

ಎಂಜನೀಯರಿಂಗ್ ಅಧಿಕಾರಿ ವಿಜಿ ಕ್ಯಾಪ್ಟನ್ ಪ್ರಿಯಾಂಶು, ಪೈಲಟ್ ಮುಖ್ಯಸ್ಥರಾದ ಬುದ್ಧಿ ಸಾಗರ, ಅಂಕಿತಾ ಸಿಂಗ್ ಹಾಗೂ ವಿಷ್ಣು ಮಾಧ್ಯಮ ಸಂವಾದದಲ್ಲಿ ಉಪಸ್ಥಿತರಿದ್ದರು.

****

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ವಾಯುಪಡೆ ಅಗ್ನಿವೀರ  ನಿರ್ಗಮನ ಪಥ ಸಂಚಲನ; ಆಕರ್ಷಕ ವೈಮಾನಿಕ ಪ್ರದರ್ಶನ  ರಾಷ್ಟ್ರೀಯ ಸುದ್ದಿ

ವಾಯುಪಡೆ ಅಗ್ನಿವೀರ ನಿರ್ಗಮನ ಪಥ ಸಂಚಲನ; ಆಕರ್ಷಕ ವೈಮಾನಿಕ ಪ್ರದರ್ಶನ

ವಾಯುಪಡೆ ಅಗ್ನಿವೀರ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚನ ನಿಮಿತ್ತ ಈ ಸಲ ಭಾರತೀಯ ವಾಯುಸೇನೆಯ ವಿಶ್ವವಿಖ್ಯಾತ ಕುಶಾಲಾಗ್ರ ಸಾರಂಗ ಪೈಲಟ್ ತಂಡದಿಂದ ರೋಮಾಂಚಕಾರಿ ಹೆಲಿಕಾಪ್ಟರ್ ಪ್ರದರ್ಶನ ವಾಯುಪಡೆ ತರಬೇತಿ ಶಾಲೆಯ ಆವರಣದಲ್ಲಿ ಪ್ರದೇಶದಲ್ಲಿ ನಡೆಯಿತು. ಐದು ಹೆಲಿಕಾಪ್ಟರ್ ಗಳು ಸುಮಾರು 15 ನಿಮಿಷದ ವರೆಗೆ ನೀಡಿದ ಪ್ರದರ್ಶನ ರೋಮಾಂಚಕಾರಿಯಾಗಿತ್ತು.

Admin